ಜೀವನ ಪ್ರಯಾಣದ ಪರಿಪೂರ್ಣ ಮಾರ್ಗ
ಹಿಂದೂ- ಧರ್ಮ ಮತ್ತು ಸಂಸ್ಕೃತಿ ಸರಣಿಯ ಮುಂದುವರೆದ ಭಾಗ.
‘ಹಿಂದುತ್ವ’ವನ್ನು ಜಾತಿಯಾಗಿ ತೆಗೆದುಕೊಮ್ಡರೂ, ಧರ್ಮವಾಗಿ ತೆಗೆದುಕೊಂಡರೂ ಭಾರತದ ಬಗ್ಗೆ ಮತನಾಡುವಾಗ ಅದನ್ನು ಬಿಟ್ಟು ಮಾತನಡುವುದು ಸಾಧ್ಯವೇ ಇಲ್ಲ. ದಕ್ಷಿಣ ಏಷ್ಯಾದ ಭೂಭಾಗವೊಂದು ‘ಭರತ’ ಎಂಬ ಹೆಸರನ್ನು ಪಡೆದಿರುವುದೇ ಹಿಂದುತ್ವದ ಕಾರಣದಿಂದ. ಹಿಂದುತ್ವ- ತಮಸೋಮಾ ಜ್ಯೋತಿರ್ಗಮಯ’ ಎನ್ನುತ್ತದೆ. ಅಂದರೆ, ಕತ್ತಲಿನಿಂದ ಬೆಳಕಿನೆಡೆಗೆ ಸಾಗೋಣ ಎಂದು. ಅಂತೆಯೇ, ‘ಭ’ ಧಾತುವು ಬೆಳಕನ್ನೂ, ‘ರತ’ವು ಚಲನೆಯನ್ನೂ ಸೂಚಿಸುತ್ತವೆ. ಒಟ್ಟಾರೆ, ‘ಭಾರತ’ ಪದದ ಅರ್ಥವೂ ‘ಬೆಳಕಿನೆಡೆಗೆ ಚಲಿಸೋಣ’ ಎಂದೇ.
ಹಿಂದೂ ಧರ್ಮದ ಮೂಲಭೂತ ತತ್ತ್ವ- “ಸತ್ಯವು ಏಕಮೇವಾದ್ವಿತೀಯವಾಗಿದೆ’ ಎಂಬುದು. ಮತ್ತು, ಈ ಸತ್ಯವು ಮಾನವನ ಅರಿವಿನಾಚೆ ಇದೆ. ಅದನ್ನು ಅರಿಯುವ ನಿರಂತರ ಪ್ರಯತ್ನವೇ ಬೆಳಕಿನೆಡೆಗಿನ ಚಲನೆ. ಈ ಚಲನೆಯ ಸಂದರ್ಭದಲ್ಲಿ, ಅಂತಿಮ ಗುರಿಯನ್ನು ಹೊಂದುವ ಯತ್ನದಲ್ಲಿ ಹೊರಹೊಮ್ಮಿದ್ದು- ಅತ್ಯದ್ಭುತ ಜ್ಞಾನ ಭಂಡಾರ. ವಿಜ್ಞಾನ, ಕಲೆ, ಸಂಗೀತಗಳೆಲ್ಲವೂ ಪರಮ ಸತ್ಯದ ಆರಾಧನೆಗಾಗಿಯೇ ರೂಪುಗೊಂಡಂಥವು. ಆಧುನಿಕ ವಿಜ್ಞಾನ ಜಗತ್ತಿಗೂ ಸವಾಲೆನಿಸುವ ವಾಸ್ತು ವಿನ್ಯಾಸಗಳು, ಲೋಹ- ಪಷಾಣ- ಕಾಷ್ಠ ಶಿಲ್ಪಗಳು, ಆರೋಗ್ಯ ವಿಜ್ಞಾನ, ಖಗೋಳ ಶಾಸ್ತ್ರ, ಕಾಲಮಾಪನದ ನಿಖರತೆ ಇವೆಲ್ಲದರ ಗುರಿಯೂ ಅದೇ ಆಗಿದೆ. ಹೀಗಾಗಿ ಭಾರತೀಯ ಸಂಸ್ಕೃತಿ, ಭಾರತದ ನಾಗರಿಕತೆ, ಭರತೀಯ ಇತಿಹಾಸಗಳೆಂದರೆ ಅದು; ಹಿಂದೂ ಸಂಸ್ಕೃತಿ, ಹಿಂದೂ ನಾಗರಿಕತೆ, ಹಿಂದೂ ಇತಿಹಾಸವಲ್ಲದೆ ಬೇರೆಯಲ್ಲ.
~ ಹಿಂದೂ ಧರ್ಮ ~
ಛಂದೋಗ್ಯ ಉಪನಿಷತ್ತು (೨:೧) ಹೇಳುವಂತೆ, “ಬ್ರಹ್ಮವು ಅನಂತವೂ ಅಲೌಕಿಕವೂ ಪರಿಪೂರ್ಣವೂ ಆದ ಅಸ್ತಿತ್ವ. ಈ ಪೂರ್ಣದಿಂದಲೇ ಎಲ್ಲವೂ ಉದ್ಭವಿಸುತ್ತವೆ. ಎಲ್ಲವೂ ಈ ಪೂರ್ಣದಲ್ಲೇ ವಿಲೀನವಾಗುತ್ತವೆ”
ಹಿಂದೂ ಧರ್ಮವು ಪರಮ ಸತ್ಯದ ಕುರಿತು ದೃಢ ಧ್ವನಿಯಲ್ಲಿ, “ಸತ್ಯವು ಒಂದೇ ಆಗಿದೆ, ವಿದ್ವಾಂಸರು ಅದನ್ನು ವಿವಿಧ ಹೆಸರುಗಳಿಂದ ಕರೆಯುವರು” (ಏಕೋಹಮ್, ವಿಪ್ರಾ ಬಹುಧಾಃ ವದನ್ತಿ- ಋಗ್ವೇದ) ಎಂದು ಸಾರಿದೆ. ಆದರೆ, ಇವತ್ತಿನ ಹಿಂದೂ ಜಾತಿ, ಮೂಲ ಧರ್ಮದ ಉದಾತ್ತ ಧ್ಯೇಯಗಳನ್ನು ಕೈಬಿಡುತ್ತ, ಸಂಕುಚಿತವಾಗುತ್ತ ಮುನ್ನಡೆದಿದೆ. ಆದ್ದರಿಂದ, ಹಿಂದೂ ಧರ್ಮದ ಕುರಿತು ಮಾತನಾಡುವಾಗ, ಹಿಂದೂ ಜಾತಿಯ ಆಚೆ ನಿಂತು ನೋಡಬೇಕಾದುದು ಅತಿ ಮುಖ್ಯ.
ಸನಾತನ ಧರ್ಮದ ಅರಾಧ್ಯ ದೇವತೆಯೆಂದರೆ, ಅದು ಪ್ರಕೃತಿಯೇ. ಜೀವಧಾರಣೆಗೆ ಅಗತ್ಯಬಿರುವ ಪಂಚಭೂತಗಳ ಆರಾಧನೆಯೇ ಅಂಡಿನ ರೂಢಿಯಾಗಿತ್ತು. ಶಾಖ-ಬೆಳಕು ನೀಡುವ ಪೂಷನ್ (ಸೂರ್ಯ), ದೈನಂದಿನ ಕಾರ್ಯಗಳಿಗೆ ಅಗತ್ಯನಾದ ಜಾತವೇದಸ (ಅಗ್ನಿ), ಕೃಷಿಗೆ ಅನುಕೂಲನಾದ ವರುಣ, ಮಳೆಯ ಅಧಿಪತಿಯಾದ ಇಂದ್ರ, ಜೀವನಾಧಾರನಾದ ವಾಯು- ಇವರೆಲ್ಲ ವೇದಕಾಲದ ದೇವತೆಗಳು.
ಹಿಂದೂ ಧರ್ಮದ ವ್ಯಾಖ್ಯೆಯಂತೆ, ಭಗವಂತ ಎಂದರೆ ಪ್ರಕೃತಿ. ಭಗವಂತ ಎಂಡರೆ ಪುರುಷ. ಭಗವಂತ ಎಂದರೆ ಬ್ರಹ್ಮ, ವಿಷ್ಣು, ಮಹೇಶ್ವರ, ಲಕ್ಷ್ಮಿ, ಪಾರ್ವತಿ, ಸರಸ್ವತಿ… ಯಾರು ಬೇಕಾದರೂ. ಜೀವನದ ಅವಶ್ಯಕತೆಗೆ ತಕ್ಕಂತೆ ಇಲ್ಲಿ ಭಗವಂತ ರೂಪುಗೊಳ್ಳುತ್ತಾನೆ. ಅಂತೆಯೇ ರೈತನಿಗೆ ಮಣ್ಣೂ ದೇವರಾಗುತ್ತದೆ. ಸೈನಿಕನಿಗೆ ಮಾತೃಭೂಮಿ ದೇವತೆಯಾಗುತ್ತಾಳೆ. ಬೆಸ್ತನಿಗೆ ನದಿ ದೇವಿಯಾಗುತ್ತಾಳೆ. ವಿದ್ಯುಚ್ಛಕ್ತಿಯನ್ನು ಅಗತ್ಯಕ್ಕೆ ತಕ್ಕಷ್ಟು ಪ್ರಮಾಣದಲ್ಲಿ, ಅಗತ್ಯಕ್ಕೆ ತಕ್ಕ ರೂಪದಲ್ಲಿ ಪಡೆಯುವುದಿಲ್ಲವೆ? ಹಾಗೆ…
ಅಗೋಚರ ಶಕ್ತಿಯಾದ ಭಗವಂತನನ್ನು ಗ್ರಹಿಕೆಯ ವ್ಯಾಪ್ತಿಗೆ ಎಷ್ಟು ದಕ್ಕುತ್ತದೆಯೋ ಅಷ್ಟನ್ನು ಗ್ರಹಿಸಿ, ಆರಾಧಿಸುವುದು. ಆ ಮೂಲಕ ಭೂಮಿಯ ಮೆಲಿನ ತನ್ನ ಜೀವನ ನಿರ್ವಹಣೆಗೆ ಅಗತ್ಯ ಸಹಾಯವನ್ನು ಪಡೆಯುವುದು. ಈ ಗ್ರಹಿಕೆಯ ವ್ಯಾಪ್ತಿ ವಿಸ್ತರವಾಗುತ್ತಾ ಸಾಗಿದಂತೆ, ಭಗವತ್ ಶಕ್ತಿಯ ಅಗಾಧತೆಯ ಅರಿವಾಗುತ್ತ ಹೋದಂತೆ, ಲೌಕಿಕ ವಾಂಛೆಗಳು ಕುಗ್ಗುತ್ತ ಸಾಗಿ ಆಧ್ಯಾತ್ಮಿಕ ಉನ್ನತಿಗೆ ಆ ಶಕ್ತಿಯ ಸಹಕಾರವನ್ನು ಬಳಸಿಕೊಳ್ಳುವ ಪ್ರಬುದ್ಧತೆ ಬೆಳೆಯುತ್ತದೆ. ಬ್ರಹ್ಮ ಎಂದು ಕರೆಯಲ್ಪಡುವ ಆ ಅಗಾಧ ಶಕ್ತಿಯ ಅರಿವನ್ನು ಪಡೆಯುವಿಕೆಯು ಜ್ಞಾನೋದಯವೆಂದು ಕರೆಯಲ್ಪಡುತ್ತದೆ.
ಹಿಂದೂ ಧರ್ಮವು ‘ಧಾರ್ಮಿಕ ಮುಖಂದ’ನೆಂದು ಕರೆಯಲ್ಪೌವವನ ನಂಬಿಕೆ ಮತ್ತು ಅನುಭವಗಳಿಗಿಂತ ಹೆಚ್ಚಾಗಿ ಆತನ ನಡವಳಿಕೆಯ ಮೇಲೆ ತನ್ನ ನಂಬಿಕೆಯನ್ನು ಸ್ಥಾಪಿಸಿಕೊಳ್ಳುತ್ತದೆ. ಹಿಂದುತ್ವದ ಮೇಲಿರುವ ‘ಪುರೋಹಿತಷಾಹಿ’ ಅಪವಾದ, ವಾಮಪಂಥೀಯರು ಹೊರಿಸಿದ ಮಿಥ್ಯಾರೋಪವಷ್ಟೆ. ಇಲ್ಲವಾದಲ್ಲಿ ಭಾರತದ ಅನೇಕಾನೇಕ ಅಧ್ಯಾತ್ಮಿಕ ಪಂಥಗಳ ಮುಖಂಡರು, ಸಂತರು, ಅಬ್ರಾಹ್ಮಣರೇ ಹೆಚ್ಚಿನ ಸಂಖ್ಯೆಯಲ್ಲಿರಲು ಸಾಧ್ಯವಿರುತ್ತಿರಲಿಲ್ಲ. “ನಾನು ನಿಮ್ಮ ಮುಂದಾಳು, ನನ್ನನ್ನು ಅನುಸರಿಸಿ” ಎಂದು ಆದೇಶ ಮಾಡುವವನ ಅರ್ಹತೆಯನ್ನು ಜನರೇ ನಿರ್ಧರಿಸುತ್ತಿದ್ದರು. ಇಲ್ಲಿ ಮೌಢ್ಯಕ್ಕೆ, ಅಂಧ ಶ್ರದ್ಧೆಗೆ ಅವಕಾಶವಿರಲಿಲ್ಲ. (ಕಲುಷಿತ ಹಿಂದೂ ಜಾತಿಯ ಪರಿಸ್ಥಿತಿ ಇದಕ್ಕಿಂತ ಭಿನ್ನ. ಇಲ್ಲಿ ಢೋಂಗಿ ಗುರು ಶಿಷ್ಯರಿದ್ದಾರೆ, ಮೂಢ ಭಕ್ತರೂ ಇದ್ದಾರೆ)
ಭಾರತ ಕಂಡ ಅಪ್ರತಿಮ ತತ್ತ್ವಶಾಸ್ತ್ರಜ್ಞ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಒಂದೆಡೆ ಹೀಗೆ ಹೇಳಿದ್ದಾರೆ, “ ಪ್ರವಾದಿಯೊಬ್ಬನನ್ನೇ ಆಧಾರವಾಗಿಟ್ಟುಕೊಂಡ ಧರ್ಮವು ಸಂಕುಚಿತ , ತೀವ್ರಗಾಮಿ, ಅಸಹಿಷ್ಣು ಮತ್ತು ಸ್ನೇಹಭಾವದ ಕೊರತೆಯಿಂದ ಕೂಡಿರುತ್ತದೆ. ಸನಾತನ ಧರ್ಮವು ಪರಿತ್ಯಾಗ ಮತ್ತು ಶಾಂತಿ- ಸೌಹರ್ದತೆಗಳಿಂದ ಕೂಡಿರುತ್ತವೆ”. ಅವರು ಪ್ರಶ್ನಿಸುತ್ತಾರೆ, “ ಯಾವುದೆ ಅಧಿಕೃತ ವ್ಯಕ್ತಿಯನ್ನು ಪ್ರಶ್ನಿಸುವ ಅವಕಾಶವಿಲ್ಲದ ರೋಮನ್ ಕ್ಯಾಥೊಲಿಕ್ ಸಮಾಜಗಳಲ್ಲಿ ಹಿಟ್ಲರ್, ಮುಸೊಲಿನಿಯಂಥವರು ಜನಿಸಿದ್ದು ಒಂದು ಆಕಸ್ಮಿಕವೇ?” ಎಂದು.
ಹಿಂದೂ ಧರ್ಮದ ಅತ್ಯಂತ ಪ್ರಮುಖ ಧನಾತ್ಮಕ ಅಂಶ- ಅದರ ವೈಶಾಲ್ಯತೆ. ಅದು, ತನಗೆ ಸೇರದ ಇತರರನ್ನು ದ್ರೋಹಿಗಳೆಂದು ಬಗೆಯುವುದಿಲ್ಲ. ಕ್ರೌರ್ಯದಿಂಡ, ಬಲವಂತದಿಂದ ಇತರ ಮತಗಳ ಜನರನ್ನು ತನ್ನ ವ್ಯಾಪ್ತಿಗೆ ಕರೆತಂದು, ವೈವಿಧ್ಯತೆಯನ್ನು ನಾಶ ಮಾಡಿ, ಯಾಂತ್ರೀಕೃತ ತನ್ನನ್ನು ಅನುಸರಿಸುವ ಬಣವನ್ನು ಸೃಷ್ಟಿಸುವುದು ಅದಕ್ಕೆ ಬೇಕಿಲ್ಲ. ಇತಿಹಾಸದ ಯಾವ ಹಂತದಲ್ಲಿಯೂ ಹಿಂದೂಗಳು ಬಲಾತ್ಕಾರದ ಮತಾಂತರ ನಡೆಸಿದ್ದನ್ನು ನೀವು ನೋಡಲಾರಿರಿ.
ಇವತ್ತಿನ ಹಿಂದೂಗಳೂ ತಮ್ಮನ್ನು ತಾವು ಹಾಗೆಂದು ಕರೆದುಕೊಳ್ಳುವ ಮುನ್ನ ತಾವು ತಮ್ಮ ಧರ್ಮದ ಮೌಲ್ಯಗಳನ್ನು ಒಳಗೊಂಡಿದ್ದೇವೆಯೇ ಎಂದು ಪ್ರಶ್ನಿಸಿಕೊಳ್ಳಬೇಕು. ಹೃದಯ ವೈಶಾಲ್ಯತೆ ಇರದ ಯಾವೊಬ್ಬನಿಗೂ ತನ್ನನ್ನು ತಾನು ಹಿಂದೂ ಎಂದು ಕರೆದುಕೊಳ್ಳುವ ಅರ್ಹತೆ ಇರುವುದಿಲ್ಲ.
( ಮುಂದುವರೆಯುವುದು…….. )
leave a comment