‘ಯೂತ್ ಫಾರ್ ಸೇವಾ’ ವತಿಯಿಂದ ಯುವದಿನ
ಯೂತ್ ಫಾರ್ ಸೇವಾ, ಕಳೆದ ಎರಡು ವರ್ಷಗಳಿಂದ ಸಾಮಾಜಿಕ ಚಟುವಟಿಕೆಗಳಲ್ಲಿ ನಿರತವಾಗಿರುವ ಸಂಸ್ಥೆ. ಕಾಲೇಜು ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವಲ್ಲಿ, ಅವರಿಗೆ ಸೇವೆಯ ಅವಕಾಶ ಕಲ್ಪಿಸಿಕೊದುವಲ್ಲಿ ಸಂಸ್ಥೆ ಪ್ರಮುಖ ಪಾತ್ರ ವಹಿಸಿದೆ. ಇದರ ಜೊತೆಗೆ ಸಾಫ್ಟ್ ವೇರ್ ಉದ್ಯಮದ ಮಂದಿಗೂ ಸಮಾಜ ಸ್ಪಂದನೆಯ ಅವಕಾಶವನ್ನು ಕಲ್ಪಿಸಿಕೊಡುತ್ತಿರುವ ಹೆಗ್ಗಳಿಕೆ ಈ ಸಂಸ್ಥೆಯದು. ಯೂತ್ ಫಾರ್ ಸೇವಾ ನಡೆಸುತ್ತಿರುವ ಸಮಾಜಮುಖಿ ಕಾರ್ಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನೀವು www.youthforseva.org ತಾಣವನ್ನು ನೋಡಬಹುದು, ಅವರ ಕಾರ್ಯದಲ್ಲಿ ನೀವೂ ಸಹಭಾಗಿಗಳಾಗಬಹುದು.
ಪ್ರಸ್ತುತ, ಯೂತ್ ಫಾರ್ ಸೇವಾ, ದಿನಾಂಕ ೩.೦೧.೨೦೦೯ರ ಶನಿವಾರದಂದು ಜಯನಗರದ ಆರ್.ವಿ.ಟೀಚರ್ಸ್ ಕಾಲೇಜಿನ ಸಭಾಂಗಣದಲ್ಲಿ ಯುವದಿನದ ಅಂಗವಾಗಿ (ಸ್ವಾಮಿ ವಿವೇಕಾನಂದರ ಜನ್ಮದಿನ- ಜನವರಿ ೧೨) ಚಕ್ರವರ್ತಿ ಸೂಲಿಬೆಲೆಯವರ ಉಪನ್ಯಾಸವನ್ನು ಏರ್ಪಡಿಸಿದೆ. ಸಂಜೆ ೪.೩೦ರಿಂದ ೬.೩೦ರವರೆಗೆ ಯುವದಿನದ ಅಂಗವಾಗಿ ಕಾರ್ಯಕ್ರಮಗಳಿರುತ್ತವೆ. ಚಕ್ರವರ್ತಿ ಸೂಲಿಬೆಲೆಯವರು ಸ್ವಾಮಿ ವಿವೇಕಾನಂದರ ಜೀವನವನ- ಸಂದೇಶವನ್ನು ಬಿಚ್ಚಿಡಲಿದ್ದಾರೆ.
ಯುವದಿನದ ಕಾರ್ಯಕ್ರಮಗಳಿಗಾಗಿ ಎಲ್ಲ ಆಸಕ್ತರನ್ನು ಯೂತ್ ಫಾರ್ ಸೇವಾ ಪ್ರೀತಿಯಿಂದ ಆಹ್ವಾನಿಸಿದೆ.
ನಾನು ಖ೦ಡಿತ ಬರುತ್ತೇನೆ